ಸಿಐಡಿ ಹೆಗಲಿಗೆ ಬಹುಕೋಟಿ ಆಂಬಿಡೆಂಟ್ ಪ್ರಕರಣ?

ಬಹುಕೋಟಿ ವಂಚನೆ ಪ್ರಕರಣವಾಗಿರುವ ಆಂಬಿಡೆಂಟ್ ಕೇಸ್ ಅನ್ನು ರಾಜ್ಯ ಸರ್ಕಾರ ನಗರ ಅಪರಾಧ ದಳ(ಸಿಸಿಬಿ)ಯಿಂದ ಸಿಐಡಿಗೆ ವರ್ಗಾಯಿಸುವ ಸಾಧ್ಯತೆಗಳಿವೆ ...
ಆಂಬಿಡೆಂಟ್ ಕಂಪನಿ(ಸಂಗ್ರಹ ಚಿತ್ರ)
ಆಂಬಿಡೆಂಟ್ ಕಂಪನಿ(ಸಂಗ್ರಹ ಚಿತ್ರ)
ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣವಾಗಿರುವ ಆಂಬಿಡೆಂಟ್ ಕೇಸ್ ಅನ್ನು ರಾಜ್ಯ ಸರ್ಕಾರ ನಗರ ಅಪರಾಧ ದಳ(ಸಿಸಿಬಿ)ಯಿಂದ ಸಿಐಡಿಗೆ ವರ್ಗಾಯಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಸರ್ಕಾರ ಮುಂದಿನ ಕೆಲ ದಿನಗಳಲ್ಲಿ ಆದೇಶ ಹೊರಡಿಸಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ, ಇದು ಬಹುಕೋಟಿ ಹಗರಣವಾದ್ದರಿಂದ ಸಿಐಡಿ ಗೆ ವಹಿಸುವುದು ಸೂಕ್ತ ಎಂಬ ಮಾತುಗಳು ಕೇಳಿ ಬರುತ್ತಿವೆ,
ಈ ಸಂಬಂಧ ಇನ್ನೂ ಸಮಾಲೋಚನೆ ನಡೆಯುತ್ತಿದ್ದು, ಶೀಘ್ರವೇ ನಿರ್ಧಾರ ಕೈಗೊಳ್ಳಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯ ಸಿಸಿಬಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com