ಬೆಂಗಳೂರು: ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿ ಹೊಸೂರಿನಲ್ಲಿ ನಡೆದಿದೆ.
ಅಂಬುಲೆನ್ಸ್ ಚಾಲಕ ಜಯ ಸೂರ್ಯ ಮತ್ತು ರೋಗಿ ಮದನ್ ಮೃತ ದುರ್ದೈವಿಗಳು. ಮತ್ತಿಬ್ಬರ ಹೆಸರು ತಿಳಿದು ಬಂದಿಲ್ಲ. ಹೊಸೂರು ಸಮೀಪದ ಸೀತಾರಾಮ್ ಮೆದು ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಈ ಅಪಘಾತ ಸಂಭವಿಸಿದೆ.
ಮೃತ ಮದನ್ ಹಂದಿ ಜ್ವರದಿಂದ ಬಳಲುತ್ತಿದ್ದು, ಅವರನ್ನು ತಿರುಚಿಯಿಂದ ಬೆಂಗಳೂರು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಅಂಬುಲೆನ್ಸ್ ಮೂಲಕ ಸಂಬಂಧಿಕರು ಕರೆದುಕೊಂಡು ಬರುತ್ತಿದ್ದರು.
ಈ ಬಗ್ಗೆ ಮಾಹಿತಿ ತಿಳಿದ ಹೊಸೂರು ಹುಡ್ಕೋ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವಗಳನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.