ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿಯವರು, ರಾಜ್ಯದ ರೈತರ ಹಿತದೃಷ್ಟಿಯಿಂದ ನ್ಯಾಯಾಲಯದ ಆದೇಶದಂತೆ ಲಭ್ಯವಾಗಿರುವ ಹೆಚ್ಚುವರಿ ನೀರಿನ ಬಳಕೆಗೆ ಕಾಮಗಾರಿ ಪ್ರಾರಂಭಿಸಲು ಸರ್ಕಾರ ಸಿದ್ಧವಿದೆ. ಆದರೆ, ನೀರು ಹಂಚಿಕೆಯ ಬಗ್ಗೆ ಕೇಂದ್ರ ಸರ್ಕಾರವು ಗೆಜೆಟ್ ನೋಟಿಫಿಕೇಷನ್ ಹೊರಡಿಸಿಲ್ಲ. ಇದನ್ನು ಕೂಡಲೇ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಜೊತೆಗ ನಿಯಮ 5(3)ರ ಅಡಿ ಸ್ಪಷ್ಟೀಕರಣಕ್ಕೆ ಮನವಿ ಸಲ್ಲಿಸಿದ್ದೇವೆಂದು ಮಾಹಿತಿ ನೀಡಿದರು.