ವಿಶ್ವ ಶೌಚಾಲಯ ದಿನ: ಗ್ರಾಮೀಣ ಕರ್ನಾಟಕ ಬಹಿರ್ದೆಸೆ ಮುಕ್ತ ಎಂದು ಘೋಷಿಸಿದ ಸರ್ಕಾರ
ಗ್ರಾಮೀಣ ಕರ್ನಾಟಕವನ್ನು ಬಯಲು ಬಹಿರ್ದೆಸೆ ಮುಕ್ತವನ್ನಾಗಿ ಸರ್ಕಾರ ಇಂದು ಘೋಷಣೆ ಮಾಡಿತು. ವಿಕಾಸಸೌಧ ಹಾಗೂ ವಿಧಾನಸೌಧ ನಡುವೆ ಇರುವ ಮಹಾತ್ಮಾಗಾಂಧಿ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಘೋಷಣೆ ಮಾಡಿದರು.
ಬೆಂಗಳೂರು: ಗ್ರಾಮೀಣ ಕರ್ನಾಟಕವನ್ನು ಬಯಲು ಬಹಿರ್ದೆಸೆ ಮುಕ್ತವನ್ನಾಗಿ ಸರ್ಕಾರ ಇಂದು ಘೋಷಣೆ ಮಾಡಿತು.
ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿಕಾಸಸೌಧ ಹಾಗೂ ವಿಧಾನಸೌಧ ನಡುವೆ ಇರುವ ಮಹಾತ್ಮಾಗಾಂಧಿ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಘೋಷಣೆ ಮಾಡಿದರು.