2017-18ನೇ ಸಾಲಿನಲ್ಲಿ ಕರ್ನಾಟಕದ ಸುಮಾರು 65 ಸಕ್ಕರೆ ಕಾರ್ಖಾನೆಗಳಿಗೆ 36.86 ಲಕ್ಷ ಮೆಟ್ರಿಕ್ ಟನ್ ಕಬ್ಬು ಪೂರೈಸಲಾಗಿದೆ, 15 ಲಕ್ಷ ಕಬ್ಬು ಬೆಳೆಗಾರರು ಸುಮಾರು 3.47 ಕೋಟಿ ಮೆಟ್ರಿಕ್ ಟನ್ ಕಬ್ಬನ್ನು ಕಾರ್ಖಾನೆಗಳಿಗೆ ಪೂರೈಸಿದ್ದು ಅವರೆಲ್ಲಾ ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿದ್ದಾರೆ, ಸಕ್ಕರೆ ಕಾರ್ಖಾನೆಗಳು ಸುಮಾರು 450ಕೋಟಿ ರು ಹಣ ಬಾಕಿ ಉಳಿಸಿಕೊಂಡಿದ್ದಾರೆ ಎಂದು ರೈತರು ಹೇಳಿದ್ದಾರೆ, ಆದರೆ ರಾಜ್ಯ ಸಕ್ಕರೆ ಆಯುಕ್ತ ಅಜಯ್ ನಾಗಭೂಷಣ್ ಬೆಳಗಾವಿಯ ಕಾರ್ಖಾನೆಗಳು 38 ಕೋಟಿ ರು ಮಾತ್ರ ಬಾಕಿಯಿದೆ ಎಂದು ಹೇಳಿದ್ದಾರೆ.