ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದಲ್ಲಿ ಕಾಂಪ್ಲೆಕ್ಸ್ ವೊಂದನ್ನು ನಿರ್ಮಾಣ ಮಾಡಲಾಗಿದ್ದು, ಬೆಂಗಳೂರಿನಲ್ಲಿದ್ದ ಕೆಲ ಕಚೇರಿಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಆದರೆ, ಸ್ಥಳಾಂತರಗೊಂಡಿರುವ ಈ ಕಚೇರಿಗಳಿಗೆ ಅಧಿಕಾರಿಗಳು ಇನ್ನೂ ಟೆಲಿಫೋನ್ ಸಂಪರ್ಕವಾಗಲೀ, ಇಂಟರ್ನೆಟ್ ಸೌಲಭ್ಯಗಳನ್ನಾಗಲೀ ನೀಡಿಲ್ಲ. ಹೀಗಾಗಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳು ಸಂಕಷ್ಟಕರ ಪರಿಸ್ಥಿತಿಗಳನ್ನು ಎದುರಿಸುತ್ತಿದ್ದಾರೆ.