ಮಂಡ್ಯ: ನಾಲೆಗೆ ಉರುಳಿಬಿದ್ದ ಬಸ್ 25 ಮಂದಿ ದುರ್ಮರಣ

ನಾಲೆಗೆ ಖಾಸಗಿ ಬಸ್ ಉರುಳಿಬಿದ್ದ ಪರಿಣಾಮ 25 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ನಡೆದಿದೆ....
ನಾಲೆಗೆ ಉರುಳಿಬಿದ್ದ ಬಸ್
ನಾಲೆಗೆ ಉರುಳಿಬಿದ್ದ ಬಸ್
ಮಂಡ್ಯ: ನಾಲೆಗೆ ಖಾಸಗಿ ಬಸ್ ಉರುಳಿಬಿದ್ದ ಪರಿಣಾಮ 25  ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ನಡೆದಿದೆ.
ಮಂಡ್ಯದಿಂದ ಪಾಂಡವಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ಪಕ್ಕದ ವಿಸಿ ನಾಲೆಗೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ, ಶಾಲಾ ಮಕ್ಕಳು ಸೇರಿದಂತೆ 15 ಮಂದಿ ಸಾವನ್ನಪ್ಪಿದ್ದಾರೆ.
ತಡೆಗೋಡೆ ಇಲ್ಲದ ಕಾರಣ ಬಸ್ ನಾಲೆಗೆ ಉರುಳಿ ಬಿದ್ದಿದೆ ಎಂದು ಹೇಳಲಾಗುತ್ತಿದೆ. ರಕ್ಷಣಾ ಕಾರ್ಯ ನಡೆಸಿ 20 ಶವಗಳನ್ನು ಮೇಲೆತ್ತಲಾಗಿದೆ. ದುರಂತದಲ್ಲಿ ಓರ್ವ ಶಾಲಾ ಬಾಲಕ ಮಾತ್ರ ಬದುಕುಳಿದಿದ್ದಾನೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com