ಹುಬ್ಬಳ್ಳಿ: ಗ್ರಾಮ ಪಂಚಾಯತ್ ಅಧ್ಯಕ್ಷನ ಬರ್ಬರ ಹತ್ಯೆ

ಹುಬ್ಬಳ್ಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಗಡಿ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಹುಬ್ಬಳ್ಳಿ: ಹುಬ್ಬಳ್ಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಗಡಿ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ. 
ಬಸವರಾಜ್ ಕಡಪಟ್ಟಿ (30) ಹತ್ಯೆಯಾದ ದುರ್ದೈವಿ. ಬಸವರಾಜ್ ಅವರು ಛಬ್ಬಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿದ್ದರು. 
ನಿನ್ನೆ ತಡರಾತ್ರಿ ದುಷ್ಕರ್ಮಗಿಳು ಬಸವರಾಜ್ ಅವರ ಮೇಲೆ ದಾಳಿ ನಡೆಸಿದ್ದು, ಮಾರಾಕಾಸ್ತ್ರಗಳಿಂದ ಕೊಚ್ಚಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. 
ಹಳೇ ವೈಷಮ್ಯ ಹಿನ್ನಲೆಯಲ್ಲಿ ಹತ್ಯೆ ನಡೆದಿರುವ ಶಂಕೆಗಳು ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಹುಬ್ಬಳ್ಳಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com