ಬೆಂಗಳೂರು: ನಟ, ಮಾಜಿ ಸಚಿವ ಅಂಬರೀಷ್ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ 3 ದಿನಗಳ ಕಾಲ ಶೋಕಾಚರಣೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಅಂತ್ಯಕ್ರಿಯೆಯನ್ನು ಸೋಮವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆಸಲು ತೀರ್ಮಾನಿಸಿದೆ. ಆದರೆ, ಅಂತ್ಯಕ್ರಿಯೆ ಎಲ್ಲಿ ನಡೆಯಬೇಕೆಂಬ ಬಗ್ಗೆ ರಾಜ್ಯ ಸರ್ಕಾರ ಹಾಗೂ ಅಂಬರೀಷ್ ಕುಟುಂಬದ ನಡುವೆ ಇನ್ನೂ ಒಮ್ಮತ ಮೂಡಿ ಬಂದಿಲ್ಲ ಎಂದು ಹೇಳಲಾಗುತ್ತಿದೆ.