ಬಳಿಕ ಪತ್ರಕರ್ತರು ಹಾಗೂ ಕ್ಯಾಮೆರಾ ಮೆನ್ ಗಳನ್ನು ನೂಕಲು ಪೊಲೀಸರು ಯತ್ನಿಸಿದಾಗ ಮಧ್ಯೆ ಪ್ರವೇಶ ಮಾಡಿದ ಜಿಲ್ಲಾ ಸಚಿವ ಸಿ.ಎಸ್. ಪುಟ್ಟರಾಜು ಅವರು, ಸಿಎಂ ಮನವೊಲಿಸಿ ಮಾತನಾಡುವಂತೆ ಒತ್ತಾಯಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿಯವರು, ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದರು. ಅಲ್ಲದೆ, ಸಾರಿಗೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿದರು.