ಶನಿವಾರ ಇಹಲೋಕ ತ್ಯಜಿಸಿದ ಅಂಬರೀಷ್ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದ್ದ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಮೌನರಾಗ ಮನೆ ಮಾಡಿತ್ತು. ತಮ್ಮ ಪಾಳೇಗಾರನ ಕಳೆದುಕೊಂಡ ಅಭಿಮಾನಿಗಳ ಮನಸ್ಸುಗಳು ದುಃಖಿಸಿದವು. ರಾಜಕೀಯ, ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ನಾನಾ ಗಣ್ಯರು, ಮಹನೀಯರು, ಮಠಾಧೀಶರು, ಲಕ್ಷಾಂತರ ಅಭಿಮಾನಿಗಳು, ಹಿತೈಷಿಗಳು, ಬೆಂಬಲಿಗರು, ಸ್ನೇಹಿತರು ಭಾನುವಾರ ಅಂತಿಮ ನಮನ ಸಲ್ಲಿಸಿದರು.