ತಮ್ಮ ಮಗಳ ವಿಧ್ಯಾಭ್ಯಾಸಕ್ಕೆ ಅಂಬರೀಷ್ ಹಣ ಸಹಾಯ ಮಾಡಿದ್ದರು ಎಂದು ಮತ್ತೊಬ್ಬ ಗ್ರಾಮಸ್ಥ ಮರಿಸ್ವಾಮಿ ಎಂಬುವರು ಹೇಳಿದ್ದಾರೆ. ಹಲವು ಬಡಜನತೆಯ ಮಕ್ಕಳಿಗೆ ಸಹಕಾರ ಬ್ಯಾಂಕ್ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಲಂಚ ನೀಡದೇ ಕೆಲಸ ಕೊಡಿಸಲು ಅಂಬರೀಷ್ ಸಹಾಯ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಮಂಡ್ಯದಲ್ಲಿ ಅಂಬೇಡ್ಕರ್ ಭವನ, ರೀಡಿಂಗ್ ಹಾಲ್, ರಸ್ತೆ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳನ್ನ ಮಾಡಿದ್ದಾರೆ.