ಮೈಸೂರು, ಚಾಮರಾಜನಗರ, ಹಾಸನ, ರಾಮನಗರ ಮತ್ತು ಹಲವು ಜಿಲ್ಲೆಗಳಿಂದ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ದರ್ಶನ ಪಡೆದರು. ಸಾವಿರಾರು ವಾಹನಗಳು ಬಂದಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೂರು ದಶಕಗಳ ಕಾಲ ಕನ್ನಡ ಸಿನಿಮಾ ಪ್ರೇಕ್ಷಕರನ್ನು ರಂಜಿಸಿದ ಅಂಬರೀಷ್ ಜನ ಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ, ಮೃತ ನಟ ಪಾರ್ಥೀವ ಶರೀರದ ಮುಂದೆ ಹಲವು ಅಭಿಮಾನಿಗಳು ಸೆಲ್ಪೀ ತೆಗೆದುಕೊಂಡರು.