ಮೇಕೆದಾಟು ಪರಿಸರದಲ್ಲಿ ಜಲಾಶಯ ನಿರ್ಮಾಣ ಮಾಡಿ, ಅಂದಾಜು 30-35 ಟಿಎಂಸಿ ಹೆಚ್ಚುವರಿ ನೀರನ್ನು ಸಂಗ್ರಹಿಸಬೇಕು ಎಂಬುದು ರಾಜ್ಯದ ಉದ್ದೇಶ. ಅಲ್ಲದೆ ಬೃಹತ್ ಪ್ರಮಾಣದ ವಿದ್ಯುತ್ ಉತ್ಪಾದನೆಗೂ ರಾಜ್ಯ ಸರ್ಕಾರ ಯೋಜನೆ ಹಾಕಿಕೊಂಡಿದೆ. ಮೇಕೆದಾಟು ಯೋಜನೆ ಮೂಲಕ ಬೇಸಿಗೆ ಕಾಲದಲ್ಲಿ ಉಂಟಾಗುವ ನೀರಿನ ಕೊರತೆಯನ್ನು ನೀಗಿಸಬಹುದು ಮತ್ತು ಅಗತ್ಯಬಿದ್ದಾಗ ಕೃಷಿಗೂ ಬಳಸಿಕೊಳ್ಳಬಹುದು. ತಮಿಳುನಾಡಿಗೆ ಅದರ ಪಾಲಿನ 177 ಟಿಎಂಸಿ ನೀರನ್ನು ನೀಡಿ, ಬಾಕಿ ಸಮುದ್ರಕ್ಕೆ ಹೋಗಿ ವ್ಯರ್ಥವಾಗುವ ನೀರನ್ನು ಮೇಕೆದಾಟುವಿನಲ್ಲಿ ಸಂಗ್ರಹಿಸಹುದು ಎಂಬುದು ರಾಜ್ಯ ಸರ್ಕಾರದ ಲೆಕ್ಕಾಚಾರವಾಗಿದೆ.