ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಡಿಕೆ ಶಿವಕುಮಾರ್ ಅವರು, ಮೇಕೆದಾಟು ಯೋಜನೆ ಕುರಿತು ನಾವು ಈಗಲೇ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಡಿಸೆಂಬರ್ 14ರಂದು ನ್ಯಾಯಾಲಯದಲ್ಲಿ ವಿಚಾರಣೆ ಮತ್ತು ತೀರ್ಪು ಬಾಕಿ ಇದೆ. ಈ ಪರಿಸ್ಥಿತಿಯಲ್ಲಿ ಯೋಜನೆ ಕುರಿತು ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ಆದರೆ ಡಿಸೆಂಬರ್ 6ರಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಿಎಂ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು.