ಕೋಲಾರ: ಮನೆಯವ್ರು ನಮ್ಮ ಪ್ರೀತಿನ ಒಪ್ಪಿಕೊಳ್ಳಲಿಲ್ಲ ಎಂದು ರೈಲಿಗೆ ತಲೆಕೊಟ್ಟ ಪ್ರೇಮಿಗಳು!

ಮನೆಯವರು ತಮ್ಮ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂದು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ಬಂಗಾರಪೇಟೆ ಗಡಿ ಭಾಗದಲ್ಲಿ ನಡೆದಿದೆ.
ಜಿ.ಎಸ್ ಮೌನಿಷಾ ಹಾಗೂ ಹಿಮಚಂದ್ರ
ಜಿ.ಎಸ್ ಮೌನಿಷಾ ಹಾಗೂ ಹಿಮಚಂದ್ರ
ಕೋಲಾರ: ಮನೆಯವರು ತಮ್ಮ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂದು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ಬಂಗಾರಪೇಟೆ ಗಡಿ ಭಾಗದಲ್ಲಿ ನಡೆದಿದೆ.
ಬಂಗಾರಪೇಟೆ ಕರ್ನಾಟಕ-ಆಂಧ್ರ ಗಡಿ ಭಾಗದ ಕುಪ್ಪಂ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಬೆಳಿಗ್ಗೆ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಶರಣಾದವರನ್ನು ಜಿ.ಎಸ್ ಮೌನಿಷಾ ಹಾಗೂ ಹಿಮಚಂದ್ರ ಎಂದು ಗುರುತಿಸಲಾಗಿದ್ದು ಇಬ್ಬರೂ ಮಿಳುನಾಡಿನ ತಿರುವೆಲ್ಲೂರು ನಿವಾಸಿಗಳು ಎನ್ನಲಾಗಿದೆ. ಈ ಇಬ್ಬರೂ ಕುಪ್ಪಂನ ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದ ಬಿಎಸ್‍ಸಿ ಓದುತ್ತಿದ್ದರು.
ಕೆಲ ವರ್ಷಗಳಿಂದಲೂ ಮೌನಿಷಾ ಹಾಗೂ ಹಿಮಚಂದ್ರ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇಬ್ಬರ ಮನೆಯಲ್ಲಿಯೂ ಈ ಪ್ರೀತಿಗೆ ವಿರೋಧವಿತ್ತು.ಇದರಿಂದ ಬೇಸತ್ತ ಪ್ರೇಮಿಗಳು ಇಂದು ಬೆಳಿಗ್ಗೆ ಕುಪ್ಪಂ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆ ಸಂಬಂಧ ಕುಪ್ಪಂ ರೈಲ್ವೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com