ಕಾಲು ನೋವಿನಿಂದಾಗಿ ರಮ್ಯಾ ಅಂಬಿ ಅಂತ್ಯ ಸಂಸ್ಕಾರಕ್ಕೆ ಬಂದಿರಲಿಲ್ಲ: ಡಿ.ಕೆ.ಶಿವಕುಮಾರ್

ಕಾಲು ನೋವಿನಿಂದಾಗಿ ರಮ್ಯಾ ಅವರು ಅಂಬರೀಷ್ ಅವರ ಅಂತ್ಯ ಸಂಸ್ಕಾರಕ್ಕೆ ಬಂದಿರಲಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಸಮರ್ಥಿಸಿಕೊಂಡಿದ್ದಾರೆ...
ರಮ್ಯಾ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ (ಸಂಗ್ರಹ ಚಿತ್ರ)
ರಮ್ಯಾ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ (ಸಂಗ್ರಹ ಚಿತ್ರ)
Updated on
ಬೆಂಗಳೂರು: ಕಾಲು ನೋವಿನಿಂದಾಗಿ ರಮ್ಯಾ ಅವರು ಅಂಬರೀಷ್ ಅವರ ಅಂತ್ಯ ಸಂಸ್ಕಾರಕ್ಕೆ ಬಂದಿರಲಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಸಮರ್ಥಿಸಿಕೊಂಡಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಮ್ಯಾ ಅವರು ಕೆಲವು ದಿನಗಳ ಹಿಂದೆ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಕಾಲಿನ ಸಮಸ್ಯೆ ತೀವ್ರ ಸ್ವರೂಪದ್ದಾಗಿದೆ. ಈ ಹಿಂದೆ ಬೆಂಗಳೂರಿಗೆ ಬರುವುದಾಗಿ ಹೇಳಿದ್ದರು. ಗಾಯದ ಸಮಸ್ಯೆಯಿಂದ ಬಂದಿಲ್ಲ. ಅವರು ಓಡಾಡುವ ಪರಿಸ್ಥಿತಿಯಲ್ಲಿ ಇಲ್ಲದಿರುವುದರಿಂದ ಅಂಬರೀಷ್ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. 
ರಮ್ಯಾ ಅವರನ್ನು ಸಮರ್ಥಿಸಿಕೊಂಡ ಹಿನ್ನಲೆಯಲ್ಲಿ ಶಿವಕುಮಾರ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಟೀಕಿಸಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com