ಇದೀಗ ಈ ಬಗ್ಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಕುಮಾರಸ್ವಾಮಿ ಅವರು, 'ವಿಷ್ಣುವರ್ಧನ್ ಅವರ ಸ್ಮಾರಕ ಕುರಿತ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಡಾ ರಾಜಕುಮಾರ್, ವಿಷ್ಣುವರ್ಧನ್ ಹಾಗೂ ಅಂಬರೀಷ್ ರಂತಹ ಮಹನೀಯರನ್ನು ಸ್ಮರಿಸುವ ವಿಚಾರದಲ್ಲಿ ನಾನು ಬದ್ಧನಿದ್ದೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ಶೀಘ್ರದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.