ಅತ್ಯಾಚಾರ ಕೇಸ್ ನಲ್ಲಿ ಕರ್ತವ್ಯ ನಿರ್ಲಕ್ಷ್ಯ: ಬಂಟ್ವಾಳ ಎಎಸ್ ಐ ಅಮಾನತು

ನಗರದ ಹೊರವಲಯದ ತೋಟ ಬೆಂಗ್ರೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ನೀಡಿದ ದೂರನ್ನು ಸ್ವೀಕರಿಸದ ಬಂಟ್ವಾಳ ಠಾಣೆಯ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಮಂಗಳೂರು: ನಗರದ ಹೊರವಲಯದ ತೋಟ ಬೆಂಗ್ರೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ನೀಡಿದ ದೂರನ್ನು ಸ್ವೀಕರಿಸದ ಬಂಟ್ವಾಳ ಠಾಣೆಯ ಎಎಸ್ ಐ ರಘುರಾಮ್ ಹೆಗ್ಡೆ  ಅವರನ್ನು ಅಮಾನತುಗೊಳಿಸಲಾಗಿದೆ. 
ಮಂಗಳೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ನವೆಂಬರ್ 26 ರಂದು ದಾಖಲಾದ ಪ್ರಕರಣದ ಸಂತ್ರಸ್ತೆಯು ತನ್ನ ಮೇಲೆ ನವೆಂಬರ್ 18ರಂದು  ತಣ್ಣೀರುಬಾವಿ ಪರಿಸರದಲ್ಲಿ  7 ಮಂದಿಯುವಕರ ತಂಡದಿಂದ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ  ನವೆಂಬರ್ 20 ರಂದು ದೂರು ನೀಡಲು ತೆರಳಿದ್ದರು.ಆದರೆ ಈ ವೇಳೆ ಅವರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದರು. 
ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ಆರೋಪದಲ್ಲಿ ರಘುರಾಮ ಹೆಗ್ಡೆ ಅವರನ್ನು ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com