ರಾಯಚೂರು: ಶವಸಂಸ್ಕಾರಕ್ಕೆ ತೆರಳುವಾಗ ಟ್ರಾಕ್ಟರ್ ಪಲ್ಟಿ, ಇಬ್ಬರು ಸಾವು 26 ಜನರಿಗೆ ಗಾಯ

ಶವಸಂಸ್ಕಾರಕ್ಕೆಂದು ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು 26 ಜನರು ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಶವಸಂಸ್ಕಾರಕ್ಕೆ ತೆರಳುವಾಗ ಟ್ರಾಕ್ಟರ್ ಪಲ್ಟಿ
ಶವಸಂಸ್ಕಾರಕ್ಕೆ ತೆರಳುವಾಗ ಟ್ರಾಕ್ಟರ್ ಪಲ್ಟಿ
Updated on
ರಾಯಚೂರು: ಶವಸಂಸ್ಕಾರಕ್ಕೆಂದು ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು 26  ಜನರು ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಕಿನ್ನಾರಿಕ್ರಾಸ್ ಸಮೀಪ ನಡೆದ ದುರ್ಘಟನೆಯಲ್ಲಿ ಲಕ್ಕಮ್ಮ ವಿರೂಪಾಪುರ (65) ಹಾಗೂ ಬಸವರಾಜ ಸುಕಾಲಪೇಟೆ (60)  ಎನ್ನುವವರು ಸಾವನ್ನಪ್ಪಿದ್ದಾರೆ.
ವಿರೂಪಾಪುರದಿಂದ ಶವಸಂಸ್ಕಾರಕ್ಕಾಗಿ ದಢೇಸೂಗುರಿಗೆ  ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ.ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ 26 ಮಂದಿಗೆ ಗಾಯಗಳಾಗಿದೆ.
ಗಾಯಾಳುಗಳನ್ನು ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಈ ಪೈಕಿ ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.
ಘಟನೆ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com