ವಿಶ್ವವಿದ್ಯಾಲಯದ ಕುವೆಂಪು ಸಭಾಂಗಣದಲ್ಲಿ ಸೋಮವಾರ ಬೆಳಗ್ಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಕುಲಪತಿ ಶಿವಾನಂದ ಹೊಸಮನಿ, ಕುಲಸಚಿವ ಸಿದ್ದು ಅಲಗೂರ, ಹಣಕಾಸು ಅಧಿಕಾರಿ ಪರುಶರಾಮ ದುಡಗುಂಟಿ ಸೇರಿದಂತೆ ಹಲವರಿದ್ದರು. ಈ ವೇಳೆ 50ಕ್ಕೂ ಹೆಚ್ಚು ಕಾರ್ಯಕರ್ತರು ನೇರವಾಗಿ ಸಭಾಂಗಣಕ್ಕೆ ನುಗ್ಗಿದ್ದಾರೆ. ವಿವಿ ವಿರುದ್ಧ ಘೋಷಣೆ ಕೂಗುತ್ತ ಒಳ ಧಾವಿಸಿ ಕುಲಪತಿ ಅವರೊಂದಿಗೆ ವಾಗ್ವಾದ ನಡೆಸಿ ಅಂಗಿ ಹಿಡಿದು ಎಳೆದಾಡಿ, ಹಲ್ಲೆಗೆ ಯತ್ನಿಸಿದ್ದಾರೆ.