ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಪ್ರಿಯಾಂಕ ಖರ್ಗೆಯವರು, ವಾರದಲ್ಲಿ 5 ದಿನಗಳು ಮಾತ್ರ ಕೆಲಸವನ್ನು ಜಾರಿ ಗೊಳಿಸಿ ನಷ್ಟವನ್ನು ಭರಿಸಲು ಸಾರ್ವಜನಿಕ ರಜೆಗಳನ್ನು ಕಡಿತಗೊಳಿಸುವಂತೆ ತಿಳಿಸಿದ್ದಾರೆ. ಮುಖ್ಯವಾಗಿ ಕರ್ನಾಟಕ ಸರ್ಕಾರ ನೇಮಿಸಿದ್ದ 6ನೇ ವೇತನ ಆಯೋಗ 5 ದಿನಗಳ ವಾರದ ಪದ್ಧತಿಯನ್ನು ರಾಜ್ಯದಲ್ಲಿಯೂ ಜಾರಿಗೆ ತರಬೇಕೆಂದು ಶಿಫಾರಸು ಮಾಡಿದ್ದಾರೆ.