ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್ ಶಾಸಕರ ವಿರುದ್ಧ ಕೋರ್ಟ್ ಬುಧವಾರ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.
ಅದಿರು ನಾಪತ್ತೆ ಪ್ರಕರಣದ ವಿಚಾರಣೆಗೆ ಸತತ ಗೈರಾಗಿದ್ದ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಮತ್ತು ಆನಂದ್ ಸಿಂಗ್ ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ್ದು, ತಕ್ಷಣ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದೆ.
ಕೋರ್ಟ್ ಆದೇಶದಿಂದಾಗಿ ಶಾಸಕ ಆನಂದ್ ಸಿಂಗ್ ಹಾಗೂ ಶಾಸಕ ನಾಗೇಂದ್ರ ಬಂಧನದ ಭೀತಿಯಲ್ಲಿದ್ದಾರೆ.
ಇನ್ನು ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ನಾಗೇಂದ್ರ ಅವರು, ಕೋರ್ಟ್ ವಾರಂಟ್ ಬಗ್ಗೆ ಗೊತ್ತಾಗಿದೆ. ವಾರಂಟ್ ಹಿಂಪಡೆಯುವಂತೆ ಕೋರಿ ನಾಳೆ ಕೋರ್ಟ್ ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.