ಒಂದೆಡೆ ಬರ. ಜಲಕ್ಷಾಮವಾದರೆ ಇನ್ನೊಂದೆಡೆ ಪ್ರವಾಹ ಪೀಡಿತವಾಗಿರುವ ತಾಲ್ಲೂಕುಗಳನ್ನು ಸಹ ನಾವು ಆಣುತ್ತೇವೆ. ರಾಜ್ಯದ ಒಳನಾಡಿನಲ್ಲಿರುವ ಸುಮಾರು , 45 ತಾಲ್ಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಉಂತಾಗಿ ಅಪಾರ ಹಾನಿಯಾಗಿದೆ. ಕೊಡಗು, ದಕ್ಷಿಣ ಕನ್ನಡ, , ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು ಮತ್ತು ಮೈಸೂರುಗಳಲ್ಲಿ ಪ್ರವಾಹ ಸನ್ನಿವೇಶ ಉಂತಾಗಿದೆ.ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಿದ್ದು ಮಳೆಯಿಂದಾಗಿ ಭೂಕುಸಿತಗಳು ಸಂಭವಿಸಿದ್ದವು. ಶಿರಾಡಿ ಮತ್ತು ಸಂಪಾಜೆ ಘಾಟ್ ರಸ್ತೆಗಳನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಕರಾವಳಿ ಪ್ರದೇಶಗಳನ್ನು ರಾಜ್ಯದ ಮುಖ್ಯ ವಾಹಿನಿಗೆ ಸಂಪರ್ಕಿಸುವ ಎರಡು ಪ್ರಮುಖ ಮಾರ್ಗಗಳು ಬಂದ್ ಆಗಿದ್ದವು. ರಾಜ್ಯದಲ್ಲಿ ಪ್ರವಾಹ ಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ಇತ್ತೀಚೆಗೆ ಘೋಷಿಸಲಾಯಿತು.