ನ್ಯಾಯಮೂರ್ತಿಗಳಾದ ಕುರಿಯನ್ ಜೋಸೆಫ್, ಎ.ಎಂ. ಖನ್ವಿಲ್ಕರ್ ಅವರನ್ನೊಳಗೊಂದ ದ್ವಿಸದಸ್ಯ ಪೀಠ ಈ ಆದೇಶ ನಿಡಿದೆ. ಇದಕ್ಕೆ ಮುನ್ನ ಸೆಪ್ಟೆಂಬರ್ 7ರಂದು ನಡೆದ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿತ್ತು. ಆದರೆ ಇದೀಗ ಮಠದ ವಶದಲ್ಲೇ ದೇವಾಲಯ ಇರಲಿ ಎನುವ ಮೂಲಕ ಜಿಲ್ಲಾಧಿಕಾರಿ ನೇತೃತ್ವದಲ್ಲಿ ದೇವಸ್ಥಾನ ಆಡಳಿತ ನಡೆಸಲು ರಚಿಸಲಾಗಿದ್ದ ಸಮಿತಿಯನ್ನು ನ್ಯಾಯಾಲಯ ರದ್ದುಗೊಳಿಸಿದೆ.