ಬಳಿಕ ಡಾಬಾದಲ್ಲಿ ಕೆಲಸ ಮಾಡುತ್ತಿದ್ದ ಸುಂದರ್ ಎಂಬುವವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ 10 ಗಂಟೆ ಸುಮಾರಿಗೆ ಘಟನಾ ಸ್ಥಳಕ್ಕೆ ಆ್ಯಂಬುಲೆನ್ಸ್ ಬಂದಿದೆ. ಸುರೇಶ್ ಅವರನ್ನು ಕೂಡಲೇ ನೆಲಮಂಗಲದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದ ಕಾರಣ ಸುರೇಶ್ ಅವರು ಮೃತಪಟ್ಟಿದ್ದಾರೆ. ಅಪಘಾತದಿಂದಾಗಿ ಸುರೇಶ್ ಅವರ ತಲೆಗೆ ತೀವ್ರವಾಗಿ ಪೆಟ್ಟಿ ಬಿದ್ದಿದ್ದು, 42 ನಿಮಿಷಗಳ ಕಾಲ ತೀವ್ರ ರಕ್ತಸ್ರಾವವಾಗಿದೆ.