ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಉಪ ಮೇಯರ್ ರಮೀಳಾ ಉಮಾಶಂಕರ್ ಅವರ ಆಕಸ್ಮಿಕ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.
ನಿನ್ನೆಯಷ್ಟೇ 'ನಮ್ಮ ಮಟ್ರೊ' ಕಾರ್ಯಕ್ರಮದಲ್ಲಿ ನಮ್ಮ ಜೊತೆ ಭಾಗವಹಿಸಿ ದಿನವಿಡೀ ಲವಲವಿಕೆಯಿಂದ ಇದ್ದ ರಮೀಳಾ ಅವರು ಇಂದು ಇಲ್ಲವಾಗಿರುವುದು ತೀವ್ರ ಆಘಾತ ಮತ್ತು ನೋವು ತಂದಿದೆ ಎಂದು ಮುಖ್ಯಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ.
ನಿಧನದ ಸುದ್ದಿ ಕೇಳುತ್ತಿದ್ದಂತೆ ಅವರ ಕುಟುಂಬ ಸದಸ್ಯರಿಗೆ ಸಿಎಂ ಕುಮಾರಸ್ವಾಮಿ ಕರೆ ಮಾಡಿ ಸಾಂತ್ವನ ಹೇಳಿದರು. ಪೂರ್ವ ನಿಯೋಜಿತ ಕಾರ್ಯಕ್ರಮವಿರುವುದರಿಂದ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
Advertisement