ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ, ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ನಾರಾಯಣ ಅವರು, ಬುಧವಾರದಿಂದ ದಸರಾ ಆರಂಭಗೊಳ್ಳಲಿದ್ದು, ಮಂಗಳವಾರ ರಾತ್ರಿಯಿಂದಲೇ ಪೌರ ಕಾರ್ಮಿಕರು ಸ್ವಚ್ಛತಾ ಕಾರ್ಯಗಳನ್ನು ಆರಂಭಿಸಲಿದ್ದಾರೆ. ಮುಂದಿನ ಕೆಲ ದಿನಗಳ ಕಾಲ ಹೆಚ್ಚು ಗಂಟೆಗಳ ಕಾಲ ಕಾರ್ಮಿಕರು ಕೆಲಸ ಮಾಡಲಿದ್ದಾರೆ. ಧರಣಿ ಬಿಟ್ಟರೆ ನಮಗಾವುದೇ ಆಯ್ಕೆಗಳಿರಲಿಲ್ಲ. ನಮ್ಮಿಂದಾದ ಸಮಸ್ಯೆಗಳಿಗೆ ವಿಷಾದ ವ್ಯಕ್ತಪಡಿಸುತ್ತೇವೆ. ಮುಂದಿನ 48 ಗಂಟೆಗಳಲ್ಲಿ ನಗರ ಸ್ವಚ್ಛಗೊಳ್ಳಲಿದೆ ಎಂದು ಹೇಳಿದ್ದಾರೆ.