ಅಂತಿಮ ತೀರ್ಪು ಬರುವವರೆಗೆ ದೇವಸ್ಥಾನವನ್ನು ಮಠಕ್ಕೆ ಒಪ್ಪಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ ಎಂದು ಉಲ್ಲೇಖಿಸ್ದ ಪತ್ರವನ್ನು ಮಠವು ಕಳೆದ ವಾರ ಸರ್ಕಾರಕ್ಕೆ ನೀಡಿದೆ.ನ್ಯಾಯಾಲಯದ ಆದೇಶದ ಪ್ರಕಾರ, ದೇವಸ್ಥಾನದ ಸಂಪೂರ್ಣ ಹೊಣೆಗಾರಿಕೆಯನ್ನು ಮಠಕ್ಕೆ ಒಪ್ಪಿಸುವಂತೆ ಜಿಲ್ಲಾಧಿಕಾರಿ ಎಸ್.ನಕುಲ್ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗೆ ಮತ್ತು ಕುಮಟಾ ಎಸಿಗೆ ಪತ್ರ ಬರೆದು ತಿಳಿಸಿದ್ದಾರೆ.