ಮಾನಸಿಕ ಖಿನ್ನತೆ: ಮಣಿಪಾಲ ಎಂಐಟಿ ವಿದ್ಯಾರ್ಥಿ ಆತ್ಮಹತ್ಯೆ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಣಿಪಾಲ ಎಂಐಟಿ ವಿದ್ಯಾರ್ಥಿ ಯೊಬ್ಬ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ....
ಅವಿನಾಶ್ ವೆಂಕಟೇಶ್
ಅವಿನಾಶ್ ವೆಂಕಟೇಶ್
ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಣಿಪಾಲ ಎಂಐಟಿ ವಿದ್ಯಾರ್ಥಿ ಯೊಬ್ಬ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ತೆಲಂಗಾಣದ ವೆಂಕಟೇಶ್ ಎಂಬುವರ ಪುತ್ರ ಅವಿನಾಶ್ ವೆಂಕಟೇಶ್ ಎಂದು ಗುರುತಿಸಲಾಗಿದೆ, ಐಐಟಿ ವಿದ್ಯಾರ್ಥಿಯಾಗಿದ್ದ ಈತ ಜೀವನದಲ್ಲಿ ಜುಗುಪ್ಸೆಗೊಂಡು ಎಂಐಟಿ ಕ್ಯಾಂಪಸ್ ಕಟ್ಟಡದಿಂದ ಹಾರಿದ್ದ ಎಂದು ಹೇಳಲಾಗಿದೆ.
ಗಂಭೀರವಾಗಿ ಗಾಯಗೊಂಡ ಅವಿನಾಶ್ ನನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯದಲ್ಲೇ ಸಾವನ್ನಪ್ಪಿದ್ದಾನೆ ಎಂದ ಹೇಳಲಾಗಿದೆ,
ತಂದೆಗೆ ಆತ್ಮಹತ್ಯೆ ಸಂದೇಶ ಕಳುಹಿಸಿದ್ದ, ಆದರೆ ಆತನ ಆತ್ಮಹತ್ಯೆಗೆ ಕಾರಣ ಏನು ಎಂಬುದರ ಬಗ್ಗೆ ಎಲ್ಲರು ಅಚ್ಚರಿಗೊಂಡಿದ್ದಾರೆ, ಆತನಿಗೆ ಯಾವುದೇ ಕೆಟ್ಟ ಹವ್ಯಾಸ ಇರಲಿಲ್ಲ ಎಂದು ಸಬ್ ಇನ್ಸ್ ಪೆಕ್ಟರ್ ಶ್ರೀಧರ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com