ಕಲ್ಲಿದ್ದಲು ಕೊರತೆ: ಪಿಯೂಷ್ ಗೋಯಲ್ ಗೆ ಪತ್ರ ಬರೆದ ಸಿಎಂ ಕುಮಾರಸ್ವಾಮಿ

ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದ್ದು, ಕೇಂದ್ರ ಸರ್ಕಾರ ಕೂಡಲೇ ಕಲ್ಲಿದ್ದಲು ಪೂರೈಕೆ...
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Updated on
ಬೆಂಗಳೂರು: ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದ್ದು, ಕೇಂದ್ರ ಸರ್ಕಾರ ಕೂಡಲೇ ಕಲ್ಲಿದ್ದಲು ಪೂರೈಕೆ ಮಾಡಬೇಕು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬುಧವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಕೇಂದ್ರ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ಅವರಿಗೆ ಸಿಎಂ ಪತ್ರ ಬರೆದಿದ್ದು, 1720 ಮೆಗಾವ್ಯಾಟ್ ಸಾಮರ್ಥ್ಯದ ರಾಯಚೂರು ಉಷ್ಣ ಸ್ಥಾವರದಲ್ಲಿ ಶೂನ್ಯ ಕಲ್ಲಿದ್ದಲು ಸಂಗ್ರಹಣೆ ಇದೆ. ಈ ಸ್ಥಿತಿಗೆ ಕಾರಣ ಕೇಂದ್ರ ಸರ್ಕಾರಿ ಸ್ವಾಮ್ಯದ ವೆಸ್ಟರ್ನ್ ಕೋಲ್ ಫೀಲ್ಡ್ಸ್(ಡಬ್ಲ್ಯುಎಲ್ ಸಿ) ಕಾರಣ ಎಂದು ದೂರಿದ್ದಾರೆ.
ಒಪ್ಪಂದದ ಪ್ರಕಾರ ಡಬ್ಲ್ಯುಎಲ್ ಸಿ ಪೂರೈಕೆ ಮಾಡಬೇಕಿದ್ದ 6 ಲಕ್ಷ ಟನ್ ಕಲ್ಲಿದ್ದಲನ್ನು ಈವರೆಗೂ ಪೂರೈಕೆ ಮಾಡಿಲ್ಲ. ಕೇಂದ್ರ ಸರ್ಕಾರ ಎಂಸಿಎಲ್ ಮೂಲಕ ಕಲ್ಲಿದ್ದಲು ಪೂರೈಕೆ ಮಾಡಬೇಕು ಎಂದು ಸಿಎಂ, ಗೋಯಲ್ ಗೆ ಪತ್ರ ಬರೆದಿದ್ದಾರೆ.
ಡಬ್ಲ್ಯುಎಲ್ ಸಿ ಒಪ್ಪಂದದ ಪ್ರಕಾರ ಪೂರ್ಣ ಪ್ರಮಾಣದಲ್ಲಿ ಕಲ್ಲಿದ್ದಲು ಪೂರೈಕೆ ಮಾಡುವುದರೊಂದಿಗೆ ರಾಜ್ಯದಲ್ಲಿ ನಿರಂತರವಾಗಿ ನಿಗದಿತ ಪ್ರಮಾಣದ ವಿದ್ಯುತ್ ಉತ್ಪಾದನೆ ಮಾಡಲು ಸಹಕರಿಸುವಂತೆ ಕೋರಿದ್ದೇನೆ ಎಂದು ಸಿಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com