ಇಂದು ಕಾವೇರಿ ತೀರ್ಥೋದ್ಭವ: ತಲಕಾವೇರಿ ಜಾತ್ರೆಗೆ ಸಕಲ ಸಿದ್ದತೆ

ದಕ್ಷಿಣ ಬಾರತದ ಪವಿತ್ರ ನದಿಗಳಲ್ಲೊಂದಾದ ಕಾವೇರಿ ತೀರ್ಥೋದ್ಭವದ ಅಮೃತ ಘಳಿಗೆ ತುಲಾ ಸಂಕ್ರಮಣ ಇಂದು (ಬುಧವಾರ). ಇಂದು ಸಂಜೆ 6.45ಕ್ಕೆ ಕೂಡಿ ಬರುವ ಶುಭ ಗಳಿಗೆಯ....
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮಡಿಕೇರಿ: ದಕ್ಷಿಣ ಭಾರತದ ಪವಿತ್ರ ನದಿಗಳಲ್ಲೊಂದಾದ ಕಾವೇರಿ ತೀರ್ಥೋದ್ಭವದ ಅಮೃತ ಘಳಿಗೆ ತುಲಾ ಸಂಕ್ರಮಣ ಇಂದು (ಬುಧವಾರ). ಇಂದು ಸಂಜೆ 6.45ಕ್ಕೆ ಕೂಡಿ ಬರುವ ಶುಭ ಗಳಿಗೆಯಲ್ಲಿ ತಲಕಾವೇರಿ ತೀರ್ಥಕುಂಡದಿಂದ ತೀರ್ಥೋದ್ಭವವಾಗಲಿದೆ. ಇದನ್ನು ಕಣ್ತುಂಬಿಕೊಳ್ಳುವ ಸಲುವಾಗಿ ನಾಡಿನಾದ್ಯಂತದಿಂದ ಸಾವಿಆರು ಭಕ್ತರು ತಲಕಾವೇರಿಗೆ ಆಗಮಿಸಲಿದ್ದಾರೆ.
ಭಕ್ತರನ್ನು ಸ್ವಾಗತಿಸುವ  ಹಾಗೂ ಅವರ ಸುರಕ್ಷತೆ ದೃಷ್ಟಿಯಿಂದ ತಲಕಾವೇರಿ ಹಾಗೂ ಭಾಗಮಂಡಲ ಪ್ರದೇಶದಲ್ಲಿ ಸಕಲ ಸಿದ್ದತೆಗಳು ನಡೆದಿದೆ. ಪ್ರವಾಸಿಗರಿಗಾಗಿ ಬಸ್ ವ್ಯವಸ್ಥೆ, ಬ್ಯಾರಿಕೇಡ್ ನಿರ್ಮಾಣ ಹಾಗೂ ವಾಹನ ನಿಲ್;ಉಗಡೆ ವ್ಯವಸ್ಥೆ ಮಡಲಾಗಿದೆ. ಭದ್ರೆಅತೆಯ ಹಿತದೃಷ್ಟಿಯಿಂದ ಸುಮಾರು 600 ಪೋಲೀಸರು ನಿಯೋಜಿಸಲ್ಪಟ್ಟಿದ್ಡಾರೆ. 
ಕಾವೇರಿಯು ತೀರ್ಥರೂಪಿಣಿಯಾಗಿ ತುಲಾ ಸಂಕ್ರಮಣದಂದು ಕಾಣಿಸಿಕೊಳ್ಳುತ್ಟಾಳೆ. ಅಂದು ಕಾವೇರಿಗೆ ಪೂಜೆ ಸಲ್ಲಿಸಿ ತೀರ್ಥ ಪಡೆದು ಬಳಿಕ ಪ್ರಸಾದ ವಿತರಣೆ ನಡೆಯುತ್ತದೆ ಎಂದು ತಲಕಾವೇರಿ ದೇವಸ್ಥಾನದ ಅರ್ಚಕ ನಾರಾಯಣಾಚಾರ್ ಹೇಳಿದ್ದಾರೆ.
ಜಾತ್ರೆ ಸಿದ್ದತೆ ಪರಿಶೀಲನೆಗೆಂದು ಇಂದು ಜಿಲ್ಲಾಧಿಕಾರಿಗಳಾದ ಪಿ.ಐ. ಶ್ರೀವಿದ್ಯಾ ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಸೋಮವಾರ ಸ್ಥಳಕ್ಕೆ ಆಗಮಿಸಿದ್ದರು.
ಮುಖ್ಯಮಂತ್ರಿ ಭೇಟಿ
ಬುಧವಾರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಡಿಕೇರಿಗೆ ಭೇಟಿ ನೀಡಲಿದ್ದು ಪ್ರವಾಹ ಸಂತ್ರಸ್ಥರೊಡನೆ ಸಂವಾದ ನಡೆಸಲಿದ್ದಾರೆ. ಬಳಿಕ ಅಧಿಕಾರಿಗಳ ಸಭೆ ನಡೆಸುವ ಮುಖ್ಯಮಂತ್ರಿಗಳು ಸಂಜೆ ವೇಳೆಗೆ ತಲಕಾವೇರಿಗೆ ಭೇಟಿ ಕೊಡಲಿದ್ದು ಕಾವೇರಿ ತೀರ್ಥೋದ್ಭವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com