ಚಂದ್ರಲೋಕದಲ್ಲಿ ವಾಸ ಮಾಡುವ ವ್ಯವಸ್ಥೆ ಮಾಡುವ ಹಂತಕ್ಕೆ ಚಿಂತನೆ ನಡೆಸುವ ಮಟ್ಟಕ್ಕೆ ನಾವು ವೈಜ್ಞಾನಿಕವಾಗಿ ಮುಂದುವರೆದಿದ್ದೇವೆ. ಇಷ್ಟೆಲ್ಲಾ ಇದ್ದರೂ ಪ್ರಕೃತಿ ವಿಕೋಪಗಳನ್ನು ತಡೆಯಲಾಗುತ್ತಿಲ್ಲ. ನಮ್ಮ ಪೂರ್ವಜರು ನಿರ್ದಿಷ್ಟ ಉದ್ದೇಶಗಳನ್ನಿಟ್ಟುಕೊಂಡು ಕೆಲವು ನಿಯಮಗಳನ್ನು ಮಾಡಿರುತ್ತಾರೆ. ಅವುಗಳಿಗೆ ನಿರ್ದಿಷ್ಟ ಉದ್ದೇಶಗಳಿರುತ್ತವೆ. ಆ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕು. . ಹಿಂದೆ ಹೇಗೆ ನಡೆದುಕೊಂಡು ಬಂದಿದೆ ಹಾಗೇ ನಡೆದುಕೊಂಡು ಹೋಗಲಿ. ಇದನ್ನು ನಾನು ಸಿಎಂ ಆಗಿ ಹೇಳಿದ್ದಲ್ಲ, ಬದಲಾಗಿ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದ್ದಾರೆ.