ಮತ್ತಿಕೆರೆ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಜಗದೀಪ್ ಸಿಂಗ್ ಹಾಗೂ ಸುಹಾನ್ ಗುರುವಾರ ರಾತ್ರಿ ಇಬ್ಬರು ಸ್ನೇಹಿತೆಯರ ಜತೆ ಹೋಟೆಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾರೆ. ಆ ವೇಳೆ ಅಲ್ಲೇ ಇದ್ದ ಸ್ಥಳೀಯ ಯುವಕರು ಮದ್ಯದ ಅಮಲಿನಲ್ಲಿ ಯುವತಿಯರ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿ ಮಾತನಾಡಿದ್ದಾರೆ. ಆಗ ಕ್ರೋಧಗೊಂಡ ಜಗದೀಪ್ ಸಿಂಗ್ ಸಭ್ಯತೆಯಿಂದ ವರ್ತಿಸುವಂತೆ ಹೇಳಿದ್ದಾರೆ.