ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಮಾತನಾಡಿದ ಮಾತೇ ಮಹಾದೇವಿ, ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಲಿಂಗಾಯತ ಧರ್ಮ ಕಾರಣವಲ್ಲ, ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಬೇರೆ ಕಾರಣಗಳಿವೆ. ಆದರೆ ಅದಕ್ಕೆ ಲಿಂಗಾಯತ ಧರ್ಮದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಲಿಂಗಾಯತ ಧರ್ಮ ಪ್ರತ್ಯೇಕ ಮಾನ್ಯತೆ ವಿಚಾರಕ್ಕಾಗಿಯೇ ಈ ಬಾರಿ ಕಾಂಗ್ರೆಸ್ಗೆ ಹೆಚ್ಚು ಮತಗಳು ಬಿದ್ದಿವೆ. ಬೀದರ್ನಲ್ಲಿ ಐದು ಶಾಸಕರಲ್ಲಿ ನಾಲ್ವರು ಕಾಂಗ್ರೆಸ್ನಿಂದಲೇ ಆಯ್ಕೆಯಾಗಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.