ಕಂಪನಿಯ ಹೆಸರಿಗೆ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ನಾಮಫಲಕಕ್ಕೆ ಸೂಕ್ತ ಮಾರ್ಗದರ್ಶನಗಳನ್ನು ನೀಡಲಾಗುತ್ತದೆ. ಆದೇಶ ಪಾಲನೆ ಮಾಡದಿರುವವರ ಪರವಾನಗಿಯನ್ನು ರದ್ದು ಮಾಡಲಾಗುತ್ತದೆ. ಹೊರ ರಾಜ್ಯ ಹಾಗೂ ದೇಶಗಳಿಂದ ಬಂದಂತಹ ಕಂಪನಿಗಳಿಗೆ ನಮ್ಮ ಭೂಮಿ, ರಸ್ತೆ, ವಿದ್ಯುತ್, ನೀರು ಬೇಕು. ಆದರೆ, ನಮ್ಮ ಭಾಷೆಗೆ ಅವರಲ್ಲಿ ಜಾಗವಿರುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದ್ದಾರೆ.