ಬೆಂಗಳೂರು ದಕ್ಷಿಣ ವಿಭಾಗದ ನೂತನ ಡಿಸಿಪಿಯಾಗಿ ಕೆ. ಅಣ್ಣಾಮಲೈ ಅಧಿಕಾರ ಸ್ವೀಕಾರ

ಖಡಕ್ ಅಫೀಸರ್ ಎಂದೇ ಹೆಸರಾಗಿರುವ ಪೊಲೀಸ್ ಅಧಿಕಾರಿ ಕೆ.ಅಣ್ಣಾಮಲೈ ಬೆಂಗಳೂರು ದಕ್ಷಿಣ ವಿಭಾಗದ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಡಿಸಿಪಿ ಕೆ. ಅಣ್ಣಾಮಲೈ
ಡಿಸಿಪಿ ಕೆ. ಅಣ್ಣಾಮಲೈ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ಮತ್ತೊಬ್ಬ ದಕ್ಷ ಪೊಲೀಸ್ ಅಧಿಕಾರಿಯ ಎಂಟ್ರಿಯಾಗಿದೆ. ಕರ್ನಾಟಕ ಸಿಂಗಂ ಖ್ಯಾತಿಯ  ಪೊಲೀಸ್ ಅಧಿಕಾರಿ ಕೆ.ಅಣ್ಣಾಮಲೈ ಬೆಂಗಳೂರು ದಕ್ಷಿಣ ವಿಭಾಗದ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಚಿಕ್ಕಮಗಳೂರು ಎಸ್ಪಿಯಾಗಿದ್ದ  ಅಣ್ಣಾಮಲೈ ಖಡಕ್ ಅಫೀಸರ್ ಎಂದೇ ಹೆಸರಾಗಿದ್ದು,  ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಕಚೇರಿಯಲ್ಲಿ ನಿನ್ನೆ  ನಿರ್ಗಮಿತ ಡಿಸಿಪಿ ಶರಣಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಸರ್ಕಾರದ ಆದೇಶದಂತೆ ಡಿಸಿಪಿಯಾಗಿ ವರ್ಗಾವಣೆಯಾಗಿದ್ದು, ತಮ್ಮ ಮೇಲೆ ಹೊಣೆಗಾರಿಕೆ ಹೆಚ್ಚಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com