ಬೆಂಗಳೂರು: ಭಾರತದ ಮಾಜಿ ಪ್ರಧಾನಿ, ಜೆಡಿಎಸ್ ಮುಖಂಡ ಹೆಚ್.ಡಿ.ದೇವೇಗೌಡ ಅವರು ಈ ಸಾಲಿನ "ಮಹರ್ಷಿ ವಾಲ್ಮೀಕಿ ಪ್ರಶಸ್ತಿ"ಗೆ ಆಯ್ಕೆಯಾಗಿದ್ದಾರೆ.
ರಾಜ್ಯ ಸರ್ಕಾರ ನೀಡುವ ಈ ಪ್ರಶಸ್ತಿ ಆಯ್ಕೆಗಾಗಿ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿತ್ತು.
ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದವರಿಗೆ ನೀಡಲಾಗುವ ವಾಲ್ಮೀಕಿ ಪ್ರಶಸ್ತಿ ನೀಡಲಾಗುತ್ತದೆ.
ಪದ್ಮನಾಭನಗರದಲ್ಲಿನ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಮಾಜಿ ಪ್ರಧಾನಿಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಆಗಮಿಸಿ ಗೌರವ ಸ್ವೀಕರಿಸುವಂತೆ ಕೋರಿದ್ದಾರೆ.
ಅಕ್ಟೋಬರ್ 24ರಂದು ವಾಲ್ಮೀಕಿ ಜಯಂತಿ ಇದ್ದು ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ.ಈ ಸಂದರ್ಭ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ತಂದೆಯೂ ಆದ ದೇವೇಗೌಡರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.