ಇನ್ನು ಸಮ್ಮೇಳನದಲ್ಲಿ 20 ಗೋಷ್ಠಿ ನಡೆಯಲಿದ್ದು, ಸಾಹಿತಿ ಡಾ.ಸಿ.ಎನ್. ರಾಮಚಂದ್ರನ್ ನೇತೃತ್ವದಲ್ಲಿ ಪ್ರೊ.ಎಲ್.ಎನ್. ಮುಕುಂದರಾಜ್, ಡಾ. ನೀಲಗಿರಿ ತಳವಾರ, ಡಾ.ಕೆ. ಶಾರದಾ, ಡಾ. ಪದ್ಮರಾಜ್ ದಂಡಾವತಿ, ಡಾ. ರಾಜೇಶ್ವರಿ ಮಹೇಶ್ವರಯ್ಯ ಒಳಗೊಂಡ ಸಮಿತಿಯು ಗೋಷ್ಠಿಯ ವಿಷಯಗಳನ್ನು ಅಂತಿಮಗೊಳಿಸಿದೆ. ಗೋಷ್ಠಿಯಲ್ಲಿ ಭಾಗವಹಿಸುವ ವಿದ್ವಾಂಸರ ಆಯ್ಕೆ ಇನ್ನೂ ನಡೆದಿಲ್ಲ ಎಂದು ಬಳಿಗಾರ್ ಮಾಹಿತಿ ನೀಡಿದರು.