ರಾಜ್ಯ
ಲೋಡ್ ಶೆಡ್ಡಿಂಗ್ ಮಾಡದಂತೆ ಅಧಿಕಾರಿಗಳಿಗೆ ಸಿಎಂ ಕುಮಾರಸ್ವಾಮಿ ಸೂಚನೆ
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಂತೆ ಇಂಧನ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ...
ಬೆಂಗಳೂರು: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಂತೆ ಇಂಧನ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರದ ಒಪ್ಪಂದದ ಪ್ರಕಾರ ರಾಜ್ಯಕ್ಕೆ ಕೊಡಬೇಕಿದ್ದ ಕಲ್ಲಿದ್ದಲು ಪೂರೈಕೆಯಾಗದಿರುವುದರಿಂದ ರಾಯಚೂರು ಥರ್ಮಲ್ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತವಾಗಿದೆ.
ಕೇಂದ್ರದ ವಿದ್ಯುತ್ ಗ್ರಿಡ್ ನಿಂದ ಸಹ ರಾಜ್ಯಕ್ಕೆ ಸಮ ಪ್ರಮಾಣದಲ್ಲಿ ವಿದ್ಯುತ್ ಸರಬರಾಜಾಗುತ್ತಿಲ್ಲ. ಸೋಲಾರ್ ಮತ್ತು ಹೈಡ್ರೋ ಪವರ್ ಆಧರಿಸಿ ಲೋಡ್ ಶೆಡ್ಡಿಂಗ್ ಇಲ್ಲದೆ ರಾಜ್ಯದಲ್ಲಿ ವಿದ್ಯುತ್ ಸರಬರಾಜು ಮಾಡಬೇಕೆಂದು ಬೆಸ್ಕಾಂ, ಜೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ ವಿಭಾಗಕ್ಕೆ ಕುಮಾರಸ್ವಾಮಿಯವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಪ್ರತೀನಿತ್ಯ ಒಂದು ಗಂಟೆಗಳ ಕಾಲ ಲೋಡ್ ಶೆಡ್ಡಿಂಗ್ ಆದೇಶ ಹೊರಡಿಸಲಾಗಿದೆ ಎಂಬ ಸುದ್ದಿಗಳು ಬಂದ ಹಿನ್ನಲೆಯಲ್ಲಿ ಇದನ್ನು ಗಮನಿಸಿದ ಮುಖ್ಯಮಂತ್ರಿಗಳು ಇಂದು ಕೆಪಿಟಿಸಿಎಲ್'ಗೆ ಈ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.