ಜಾಲಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರೂ ವಿದ್ಯಾರ್ಥಿಗಳಿಗೆ ಗಾಯಗಳುಂಟಾಗಿವೆ. ಅಕ್ಬರ್ (19) ಈ ಬಗ್ಗೆ ಪೊಲೀಸರಿಗೆ ಹೇಳಿಕೆ ನೀಡಿದ್ದು, ದಿನಗೂಲಿ ನೌಕರರಾಗಿದ್ದ ತನ್ನ ಪೋಷಕರಿಂದಲೇ ಕಿರುಕುಳ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಮದ್ಯವ್ಯಸನನಾಗಿದ್ದೆ ಎಂದು ಹೇಳಿದ್ದಾರೆ. ಪೋಷಕರು ನನಗೆ ಪ್ರತಿ ನಿತ್ಯ ಕೆಲಸ ಮಾಡುವಂತೆ ಒತ್ತಡ ಹೇರುತ್ತಿದ್ದರು. ಇದು ನನ್ನ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗುತ್ತಿತ್ತು, ಆದ್ದರಿಂದ ನಾನು ಮದ್ಯ ಸೇವನೆ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದಾನೆ. ಗೌತಮ್ (20) ಎಂಬ ಮತ್ತೋರ್ವ ವಿದ್ಯಾರ್ಥಿಯ ಪೋಷಕರೂ ದಿನಗೂಲಿ ನೌಕರರಾಗಿದ್ದಾರೆ. ಆದರೆ ಈ ವಿದ್ಯಾರ್ಥಿ ಯಾವುದೇ ಹೇಳಿಕೆಯನ್ನೂ ನೀಡಿಲ್ಲ. ಇಬ್ಬರೂ ವಿದ್ಯಾರ್ಥಿಗಳು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.