ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಆಹಾರ ಪ್ರಿಯರ ನೆಚ್ಚಿನ ತಾಣ, ವಿಶೇಷವಾಗಿ ರುಚಿಕರವಾದ ದೋಸೆಯಿಂದಾಗಿ ಖ್ಯಾತಿ ಪಡೆದಿರುವ ವಿದ್ಯಾರ್ಥಿ ಭವನ್ ಹೋಟೆಲ್ ಅಮೃತ ಮಹೋತ್ಸವ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಸೈನಿಕರಿಗೆ ಉಚಿತವಾಗಿ ಆಹಾರ ನೀಡಲಾಗುತ್ತಿದೆ.
ಬಸವನಗುಡಿಯ ಗಾಂಧಿ ಬಜಾರ್ ನಲ್ಲಿರುವ ಈ ಹೋಟೆಲ್ 75 ವರ್ಷ ಸೇವೆ ಪೂರ್ಣಗೊಳಿಸಿರುವ ನೆನಪಿನಲ್ಲಿ ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಹೋಟೆಲ್ ನಲ್ಲಿ 20 ವರ್ಷ ಸೇವೆ ಸಲ್ಲಿಸಿರುವ ನೌಕರರು ಹಾಗೂ ಪ್ರತಿನಿತ್ಯ ಭೇಟಿ ನೀಡುತ್ತಿದ್ದ ಕೆಲ ಗ್ರಾಹಕರನ್ನು ಇದೇ ವೇಳೆ ಸನ್ಮಾನಿಸಲಾಗುತ್ತಿದೆ.
Advertisement