ಇಂದು ವಿಕಾಸಸೌಧದಲ್ಲಿ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಬಿಬಿಎಂಪಿ ಆಡಳಿತದ ಬಗ್ಗೆ ಹೈಕೋರ್ಟ್ ನ್ಯಾಯಾದೀಶರು ಲೋಪದೋಷವನ್ನು ಎತ್ತಿಹಿಡಿದು, ಕಟುವಾಗಿ ಸೂಚನೆ ನೀಡಿದ್ದಾರೆ. ಗುಂಡಿ ಮುಚ್ಚಲು ಗಡುವು ನೀಡಿದ್ದು, ಈ ಕುರಿತ ಅರ್ಜಿ ಶನಿವಾರ ಮತ್ತೆ ಚಾರಣೆಗೆ ಬರಲಿದೆ. ಅಷ್ಟರೊಳಗೆ ಎಲ್ಲ ಗುಂಡಿಗಳನ್ನು ಮುಚ್ಚುವಂತೆ ಎಂಟು ವಲಯ ಜಂಟಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದರು.