ಪವಿತ್ರ ಶಾರದಾ ಪೀಠವು ಪಾಕ್ ಆಕ್ರಮಿತ ಕಾಶ್ಮೀರದ ನೀಲಂ ವ್ಯಾಲಿ ಜಿಲ್ಲೆಯ 'ಶಾರದಾ' ಎನ್ನುವ ಗ್ರಾಮದಲ್ಲಿದೆ.ಇದು ಜಮ್ಮು ಕಾಶ್ಮೀರ ರಾಜಧಾನಿ ಶ್ರೀನಗರದಿಂದ 96 ಕಿಮೀ, ಬಾರಾಮುಲ್ಲಾದಿಂದ 67 ಕಿಮೀ ದೂರದಲ್ಲಿದೆ. ಸಧ್ಯ ಪಾಕ್ ಹಾಗೂ ಭಾರತ ಗಡಿರೇಖೆ ಎಲ್ ಓಸಿ ಯಿಂದ ಕೇವಲ 25 ಕಿಮೀ ದೂರದಲ್ಲಿದೆ. ಹಿಂದೆ ಇದೇ ಸ್ಥಳದಲ್ಲಿ ಆದಿ ಶಂಕರಾಚಾರ್ಯರು ಸರ್ವಜ್ಞ ಪೀಠವನ್ನೇರಿದ್ದರು. ಇಲ್ಲೇ ಅವರು "ಪ್ರಪಂಚಸಾರ" ವನ್ನು ರಚಿಸಿ ಶ್ರೀ ಶಾರದಾದೇವಿಯನ್ನು ವರ್ಣಿಸಿದ್ದರು,.