ಬುಧವಾರ ಪ್ರವೀಣ್ ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದನು. ಈ ವೇಳೆ ಬಾಲಕನ ಮೇಲೆ ಸುಮಾರು 10 ಕ್ಕೂ ಹೆಚ್ಚು ನಾಯಿಗಳು ದಾಳಿ ಮಾಡಿದ್ದು, ಪ್ರವೀಣ್ ನ ಕತ್ತು, ಮೈ ಹಾಗೂ ಕೈ ಭಾಗಕ್ಕೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ. ಇದನ್ನು ಕಂಡ ಸ್ಥಳೀಯರು ನಾಯಿಗಳನ್ನು ಓಡಿಸಿ, ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಬಾಲಕನ ಸ್ಥಿತಿಯು ಚಿಂತಾಜನಕವಾಗಿತ್ತು. ಆಗ ವೈದ್ಯರು ಇನ್ನು ಮೂರು ದಿನಗಳ ಕಾಲ ಏನು ಹೇಳುವುದಕ್ಕೆ ಆಗುವುದಿಲ್ಲ ಎಂದಿದ್ದರು. ಈ ಘಟನೆ ನಡೆದ ಬಳಿಕ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.