ಲತಾ ಗಣೇಶ, ಗಾಡಿಕೊಪ್ಪ 6ನೇ ವಾರ್ಡಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಕೊನೆ ಗಳಿಗೆಯಲ್ಲಿ ಟಿಕೆಟ್ ದಕ್ಕಿಸಿಕೊಂಡು ಸ್ಪರ್ಧೆಗೆ ಇಳಿದಿದ್ದರು. ಪರಿಶಿಷ್ಠ ಜಾತಿ ಮಹಿಳಾ ಕ್ಷೇತ್ರವಾದ ಇಲ್ಲಿ ಗೆಲವನ್ನೂ ದಾಖಲಿಸಿದ್ದರು. ಇದಲ ಬೆನ್ನಲ್ಲೇ ಸರ್ಕಾರ ಶಿವಮೊಗ್ಗ ನಗರ ಪಾಲಿಕೆಯ ಮೇಯರ್ ಸ್ಥಾನವನ್ನು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿರಿಸಿ ಆದೇಶ ಹೊರಡಿಸಿದ್ದು, ಬಿಜೆಪಿಯಲ್ಲಿ ಈ ಸ್ಥಾನಕ್ಕೆ ಅರ್ಹರಾಗಿರುವವರು ಇವರೊಬ್ಬರೇ ಆಗಿದ್ದಾರೆ. ಹೀಗಾಗಿ ನಗರ ಪಾಲಿಕೆ ಸದಸ್ಯರಾಗಿ ಗೆದ್ದ ಬೆನ್ನಲ್ಲೇ ಪಾಲಿಕೆಯ ಮೇಯರ್ ಸ್ಥಾನ ಅವರನ್ನು ಹುಡುಕಿಕೊಂಡು ಬಂದಿದೆ.