ತುಮಕೂರಿನಲ್ಲಿ ಕ್ರೇನ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರ ದುರ್ಮರಣ; ಮೂವರ ಸ್ಥಿತಿ ಗಂಭೀರ

ಕೆಟ್ಟು ನಿಂತಿದ್ದ ಲಾರಿ ತೆರವುಗೊಳಿಸಲು ಬಂದಿದ್ದ ಕ್ರೇನ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದ್ದಲೇ ಮೃತ ಪಟ್ಟಿದ್ದಾರೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ತುಮಕೂರು: ಕೆಟ್ಟು ನಿಂತಿದ್ದ ಲಾರಿ ತೆರವುಗೊಳಿಸಲು ಬಂದಿದ್ದ ಕ್ರೇನ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದ್ದಲೇ ಮೃತ ಪಟ್ಟಿದ್ದಾರೆ.
ತುಮಕೂರಿನ ಕರಜೀವನಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಅಪಘಾತ ನಡೆದಿದ್ದು, ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.
ಮೂರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಕಾರು ಶಿರಾ ಕಡೆಗೆ ತೆರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ. ತುಮಕೂರಿನ ಶಿರಾ ತಾಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com