ಪತ್ರಕರ್ತೆ ಗೌರಿ ಲಂಕೇಶ್ ಅವರ ಪುಣ್ಯತಿಥಿಯ ನಿಮಿತ್ತ ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಕಾಶ್ ರೈ, ವಿಚಾರವಾದಿಗಳು, ಪ್ರಗತಿ ಪರರ ಹತ್ಯೆ ವಿಚಾರದಲ್ಲಿ ಪ್ರಧಾನಿ ಮೋದಿ ಮೌನವಾಗಿದ್ದಾರೆ. ಆದರೆ ಅವರ ಮೌನದ ಹಿಂದೆ ಓರ್ವ ರಾಕ್ಷಸ ಅಡಗಿದ್ದಾನೆ. ಪ್ರಗತಿಪರರ ಬಾಯಿ ಮುಚ್ಚಿಸಲು ಬೇಕಂತಲೇ ಕೇಸುಗಳನ್ನು ಹಾಕಲಾಗುತ್ತಿದೆ. ಪ್ರಧಾನಿ ಮೋದಿ ಕೊಲೆಗಳನ್ನು ಮಾಡಬಾರದು ಎಂದು ಹೇಳಿಕೆಗಳನ್ನು ನೀಡುತ್ತಾರೆ. ಆದರೆ ಅವರ ಹೇಳಿಕೆಗಳು ಯಾವ ರೀತಿ ಇರುತ್ತವೆ ಅಂದರೆ ಸಿನಿಮಾದಲ್ಲಿ ಸಿಗರೇಟ್ ಸೇದುವ ದೃಶ್ಯಾವಳಿಗಳಲ್ಲಿ ಬರೆದಿರುವ 'ಧೂಮಪಾನ ಆರೋಗ್ಯಕ್ಕೆ ಹಾನಿಕರ’ ಎನ್ನುವ ರೀತಿಯಲ್ಲಿ ಇರುತ್ತವೆ ಎಂದು ವ್ಯಂಗ್ಯವಾಡಿದ್ದಾರೆ.