ಬುಧವಾರ ಬೆಂಗಳೂರಿನಲ್ಲಿ ನಡೆದ ಪತ್ರಕರ್ತೆ ಗೌರಿ ಲಂಕೇಶ್ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಚಾರವಾದಿಗಳು ಕೇಂದ್ರ ಸರ್ಕಾರ ದಮನಕಾರಿ ನೀತಿ ಅನುಸರಿಸುತ್ತಿದೆ ಎಂದು ಒಕ್ಕೋರಲಿನಿಂದ ಹೇಳಿದೆ. ಗೌರಿ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ದಿ ವೈರ್ ಪತ್ರಿಕೆ ಸಂಪಾದಕ ಸಿದ್ಧಾರ್ಥ ವರದರಾಜನ್ ಅವರು, 'ಆದಿವಾಸಿಗಳು ಹಾಗೂ ದಲಿತ ಹಕ್ಕುಗಳ ಹೋರಾಟಗಾರರನ್ನು, ಬುದ್ಧಿಜೀವಿಗಳನ್ನು ಹಾಗೂ ವಕೀಲರನ್ನು ಬಂಧಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ' ಎಂದು ಆರೋಪಿಸಿದರು.