ತುಮಕೂರು: ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಭೀಕರ ಅಪಘಾತ, ಇಬ್ಬರು ಸಾವು

ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇನ್ನಿಬ್ಬರು ಗಂಬೀರ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಶಿರಾ ಬಳಿ ನಡೆದಿದೆ.
ತುಮಕೂರು: ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಭೀಕರ ಅಪಘಾತ, ಇಬ್ಬರು ಸಾವು
ತುಮಕೂರು: ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಭೀಕರ ಅಪಘಾತ, ಇಬ್ಬರು ಸಾವು
Updated on
ತುಮಕೂರು: ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇನ್ನಿಬ್ಬರು ಗಂಬೀರ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಶಿರಾ ಬಳಿ ನಡೆದಿದೆ.
ಕ್ಯಾಂಟರ್ ಚಾಲಕ ರಮೇಶ್ (45) ಹಾಗು ರೈತ ಶ್ರೀಕಾಂತ್ (45) ಮೃತರಾಗಿದ್ದು ರಾಷ್ಟ್ರೀಯ ಹೆದ್ದಾರಿ 48ರ ಮಾನಂಗಿ ಗೇಟ್ ಬಳಿ ಬರುತ್ತಿದ್ದಾಗ ಅವಘಡ ಸಂಭವಿಸಿದೆ.
ಬೆಳಗಿನ ಜಾವ ನಡೆದ ಅಪಘಾತದಲ್ಲಿ ಕ್ಯಾಂಟರ್ ಲಾರಿ ನುಜ್ಜುಗುಜ್ಜಾಗಿದೆ. ರೈತರಾದ ಶ್ರೀಕಾಂತ್ ತಾವು ಬೆಳೆದ ಈರುಳ್ಳಿಯನ್ನು ಕ್ಯಾಂಟರ್ ಒಂದನ್ನು ಬಾಡಿಗೆಗೆ ಪಡೆದು ಬೆಂಗಳೂರು ಮಾರುಕಟ್ಟೆಗೆ ಮಾರಾಟಕ್ಕಾಗಿ ತರುತ್ತಿದ್ದರು.
ಇದೇ ವೇಳೆ ಲಾರಿ ಕ್ಲೀನರ್ ಮತ್ತು ಇನ್ನೋರ್ವ ವ್ಯಕ್ತಿ ಗಂಬಿರವಾಗಿ ಗಾಯಗೊಂಡ್ದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಿರಾ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com